Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:3 - ಕನ್ನಡ ಸಮಕಾಲಿಕ ಅನುವಾದ

3 ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ದ್ರೋಹಿವಂಶಕ್ಕೆ ದೃಷ್ಟಾಂತವನ್ನೆತ್ತಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:3
30 ತಿಳಿವುಗಳ ಹೋಲಿಕೆ  

ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.


ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


“ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.


ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.


ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು.


“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.


ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


“ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು.


ಈ ಪಟ್ಟಣವು ಪಾತ್ರೆಯಾಗುವುದಿಲ್ಲ. ನೀವು ಅದರಲ್ಲಿ ಮಾಂಸವೂ ಆಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಾನು ನ್ಯಾಯತೀರಿಸುವೆನು.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಕೊಂದು ಹಾಕಿದವರ ದೇಹಗಳೇ ಮಾಂಸ, ಈ ಪಟ್ಟಣವು ಬೇಯಿಸುವ ಪಾತ್ರೆ. ಆದರೆ ನಾನು ನಿಮ್ಮನ್ನು ಅದರಿಂದ ಹೊರಗೆ ತರುತ್ತೇನೆ.


ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು.


ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.


ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.


ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು.


ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು