Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:6 - ಕನ್ನಡ ಸಮಕಾಲಿಕ ಅನುವಾದ

6 “ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಕೊಲೆಗಾರರ ಪಟ್ಟಣವಾದ ಜೆರುಸಲೇಮಿಗೆ ಆಪತ್ತು ಬರುವುದು. ಕೊಲೆಗಾರರ ನಗರಕ್ಕೆ ಕೇಡಾಗುವದು. ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಆ ಕಿಲುಬಿನ ಕಲೆಯನ್ನು ತೆಗೆಯಲಾಗುವುದೇ ಇಲ್ಲ. ಆ ಹಂಡೆಯು ಅಶುದ್ಧವಾಗಿರುವುದರಿಂದ ಅದರೊಳಗಿರುವ ಮಾಂಸವನ್ನೆಲ್ಲಾ ಹೊರಗೆ ತೆಗೆದುಬಿಡು. ಆ ಮಾಂಸವನ್ನು ನೀನಾಗಲಿ ಯಾಜಕರಾಗಲಿ ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:6
33 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.


ರಕ್ತಮಯ ಪಟ್ಟಣಕ್ಕೆ ಕಷ್ಟ, ಅದೆಲ್ಲಾ ಸುಳ್ಳಿನಿಂದಲೂ, ಕಳ್ಳತನದಿಂದಲೂ ತುಂಬಿದೆ, ಕೊಳ್ಳೆಯನ್ನೂ ಬಿಡುವುದಿಲ್ಲ.


ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.


ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.


ನೀನು ಪ್ರತ್ಯೇಕವಾಗಿ ಎದುರು ನಿಂತ ದಿವಸದಲ್ಲಿ ಪರರು ಅವನ ಸೊತ್ತನ್ನು ತೆಗೆದುಕೊಂಡು ಹೋದ ದಿವಸದಲ್ಲಿ ಪರಕೀಯರು ಅವನ ಬಾಗಿಲುಗಳಲ್ಲಿ ಪ್ರವೇಶಿಸಿ, ಯೆರೂಸಲೇಮಿನ ಸೊತ್ತಿಗಾಗಿ ಚೀಟು ಹಾಕಿದಾಗ ನೀನೂ ಅವರಲ್ಲಿ ಒಬ್ಬನ ಹಾಗಿದ್ದೆ.


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.


ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.


ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಈ ಪಟ್ಟಣವು ಪಾತ್ರೆಯಾಗುವುದಿಲ್ಲ. ನೀವು ಅದರಲ್ಲಿ ಮಾಂಸವೂ ಆಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಾನು ನ್ಯಾಯತೀರಿಸುವೆನು.


ಕುಲುಮೆಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಪರಿಶ್ರಮವೆಲ್ಲ ವ್ಯರ್ಥ, ಕೆಟ್ಟವರಿಂದ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು.


ನಿಶ್ಚಯವಾಗಿ ಯೆಹೋವ ದೇವರ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಮನಸ್ಸೆಯು ತನ್ನ ಸಮಸ್ತ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ, ಯೆಹೂದವನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕುವಂತೆ ಇದಾಯಿತು.


ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ.


ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ.


ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.


ನಿಮ್ಮ ಆಯುಧಗಳ ಜೊತೆಯಲ್ಲಿ ಕಬ್ಬಿಣದ ಸಲಕೆ ಇರಬೇಕು. ನೀವು ಮಲವಿಸರ್ಜನೆ ಮಾಡಿದಾಗ, ಆ ಸಲಕೆಯಿಂದ ಅಗೆದು ಮುಚ್ಚಿಬಿಡಬೇಕು.


ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು