Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:7 - ಕನ್ನಡ ಸಮಕಾಲಿಕ ಅನುವಾದ

7 “ ‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆರೂಸಲೇಮು ಸುರಿಸಿದ ರಕ್ತವು ಅದರಲ್ಲೇ ನಿಂತಿದೆ; ದೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮು ಕಿಲುಬು ಹಿಡಿದ ಹಂಡೆಯಂತಿದೆ. ಯಾಕೆಂದರೆ ಆಕೆ ಸುರಿಸಿದ ರಕ್ತದ ಕಲೆಗಳು ಇನ್ನೂ ಇವೆ. ಆಕೆಯು ಆ ರಕ್ತವನ್ನು ನೆಲದ ಮೇಲೆ ಸುರಿಯದೆ ಬಂಡೆಯ ಮೇಲೆ ಸುರಿದು ಅದಕ್ಕೆ ಮಣ್ಣನ್ನೂ ಮುಚ್ಚಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:7
12 ತಿಳಿವುಗಳ ಹೋಲಿಕೆ  

“ ‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು.


ರಕ್ತವನ್ನು ಮಾತ್ರ ಭುಜಿಸಬೇಡಿರಿ. ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.


“ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ, ನನ್ನ ಕೂಗು ವಿಶ್ರಾಂತಿ ಹೊಂದದಿರಲಿ!


ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.


ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ.


“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.


ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು