Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:13
29 ತಿಳಿವುಗಳ ಹೋಲಿಕೆ  

“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.


ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ,


ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.


ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶವಾಗುವ ಹಾಗೆ ತೇಮಾನೇ, ನಿನ್ನ ಪರಾಕ್ರಮಶಾಲಿಗಳು ಗಾಬರಿಪಡುವರು.


ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.


ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ”


“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.


ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್.


ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.


ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.


ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.


ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.


“ ‘ದೆದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.


“ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಅದರ ಪ್ರಧಾನರೂ ಶೂರರಾಗಿದ್ದರೂ ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಅವರು ಸುನ್ನತಿಯಿಲ್ಲದವರ ಸಂಗಡ ಮತ್ತು ಕುಣಿಗೆ ಇಳಿಯುವವರ ಸಂಗಡ ಹತರಾದವರು.


ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.


ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’


“ ‘ದೆದಾನ್ ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು