Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:4 - ಕನ್ನಡ ಸಮಕಾಲಿಕ ಅನುವಾದ

4 ನಾನು ನಿಮ್ಮನ್ನು ಪೂರ್ವದೇಶದ ಜನರಿಗೆ ಸೊತ್ತಾಗಿ ಕೊಡುತ್ತೇನೆ, ಅವರು ತಮ್ಮ ಗುಡಾರಗಳನ್ನು ನಿನ್ನಲ್ಲಿ ನೆಲೆಗೊಳಿಸುವರು. ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿಮ್ಮ ಫಲವನ್ನು ತಿಂದು ನಿಮ್ಮ ಹಾಲನ್ನೇ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರ ವಶವಾಗುವಂತೆ ಮಾಡುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿನ್ನುವರು; ನಿನ್ನ ಹಾಲನ್ನು ಕುಡಿಯುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯ ಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು ನಿನ್ನ ಹಾಲನ್ನು ಕುಡಿದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:4
17 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.


ಸೊಲೊಮೋನನ ಜ್ಞಾನವು ಮೂಡಣ ದೇಶದ ಸಮಸ್ತರ ಜ್ಞಾನಕ್ಕಿಂತಲೂ, ಈಜಿಪ್ಟಿನ ಸಮಸ್ತರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.


ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.


ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.


ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು.


ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.


ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.


ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.


ಆಗ ಯಾಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.


ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.


ಆ ಅಮ್ಮೋನನ್ನೂ ಪೂರ್ವದವರೆಗೆ ಸೊತ್ತಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವರಿಗೆ ಸೊತ್ತಾಗಿ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು