Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:8 - ಕನ್ನಡ ಸಮಕಾಲಿಕ ಅನುವಾದ

8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:8
22 ತಿಳಿವುಗಳ ಹೋಲಿಕೆ  

ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,


ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.


ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.


ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.


ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು