Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:17 - ಕನ್ನಡ ಸಮಕಾಲಿಕ ಅನುವಾದ

17 “ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೆಹೂದ್ಯರೂ, ಇಸ್ರಯೇಲ್ ನಾಡಿನವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ, ಗೋಧಿ, ‘ಪನ್ನಗ್’, ಜೇನು, ಎಣ್ಣೆ, ಸುಗಂಧತೈಲ, ಈ ಸಾಮಗ್ರಿಗಳನ್ನು ನಿನಗೆ ಸೇರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೂದ್ಯರೂ ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ವಿುನ್ನೀಥಿನ ಗೋದಿ ಕಂಡಸಕ್ಕರೆ ಜೇನು ಎಣ್ಣೆ ಸುಗಂಧತೈಲ ಈ ಸಾಮಗ್ರಿಗಳನ್ನು ನಿನಗೆ ಸೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:17
9 ತಿಳಿವುಗಳ ಹೋಲಿಕೆ  

ಯೆಫ್ತಾಹನು ಅವರನ್ನು ಅರೋಯೇರಿನಿಂದ ಮಿನ್ನೀಥಿನ ದಾರಿಯವರೆಗೆ ಮತ್ತು ಆಬೇಲ್ ಕೆರಾಮೀಮಗೆ ಹೋಗುವವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯಹೊಂದಿ, ಅಮ್ಮೋನಿಯರು ಇಸ್ರಾಯೇಲರಿಗೆ ಶರಣಾದರು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ಮರ ಕಡಿಯುವ ನಿನ್ನ ಸೇವಕರಿಗಾಗಿ, ಎರಡು ಸಾವಿರ ಟನ್ ಗೋಧಿಯನ್ನೂ, ಮೂರು ಸಾವಿರ ಟನ್ ಜವೆಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ದ್ರಾಕ್ಷಾರಸವನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು,” ಎಂದು ಹೇಳಿಸಿದನು.


ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.


ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.


ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು