Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:21 - ಕನ್ನಡ ಸಮಕಾಲಿಕ ಅನುವಾದ

21 “ ‘ಅರೇಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ಗ್ರಾಹಕರಾಗಿದ್ದರು. ಕುರಿಮರಿಗಳಿಂದಲೂ ಹೋತಗಳಿಂದಲೂ ನಿನ್ನೊಡನೆ ವ್ಯಾಪಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅರಾಬ್ಯರೂ ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಣ ವರ್ತಕರು; ಕುರಿ ಟಗರು ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:21
16 ತಿಳಿವುಗಳ ಹೋಲಿಕೆ  

ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು.


ಜನನದ ಪ್ರಕಾರ ಇಷ್ಮಾಯೇಲನ ಪುತ್ರರ ಹೆಸರುಗಳು ಇವೇ: ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತ್, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,


ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.


ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.


ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ,


ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.


ಯೆರೂಸಲೇಮಿನ ಪುತ್ರಿಯರೇ, ನಾನು ಕಪ್ಪಾದವಳು ಆದರೂ ಸುಂದರಿ. ಕೇದಾರಿನ ಗುಡಾರಗಳಂತೆಯೂ, ಸೊಲೊಮೋನನ ಡೇರೆಯ ತೆರೆಗಳಂತೆಯೂ ಚೆಲುವೆ.


ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಗಳನ್ನೂ, ಕಪ್ಪದ ಹಣವನ್ನು ತಂದರು. ಅರಬಿಯ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.


ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,


ಇದಲ್ಲದೆ ಸೊಲೊಮೋನನಿಗೆ ವರ್ತಕರಿಂದಲೂ, ವರ್ತಕರ ವ್ಯಾಪಾರದಿಂದಲೂ, ಅರೇಬಿಯದ ಅರಸರಿಂದಲೂ, ದೇಶದ ಅಧಿಪತಿಗಳಿಂದಲೂ ಸಹ ಬಂಗಾರವು ದೊರಕುತ್ತಿತ್ತು.


ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.


ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.


ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು,


ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.


ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ. ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳಿದುಕೊಳ್ಳಿರಿ. ಅಂಥದ್ದು ಉಂಟೋ ಎಂದು ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು