Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:10 - ಕನ್ನಡ ಸಮಕಾಲಿಕ ಅನುವಾದ

10 ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ಏಕೆಂದರೆ ನಾನೇ ಇದನ್ನು ನುಡಿದಿದ್ದೇನೆ” ಎಂದು ಕರ್ತನಾದ ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವಿ; ನಾನೇ ನುಡಿದಿದ್ದೇನೆ, ಇದು ಕರ್ತನಾದ ಯೆಹೋವನ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು. ನಾನು ಆ ರೀತಿಯಾಗಿ ಮಾಡಬೇಕೆಂದು ಆಜ್ಞಾಪಿಸುವದರಿಂದ ನಿನಗೆ ಹಾಗೆ ಆಗುವದು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:10
19 ತಿಳಿವುಗಳ ಹೋಲಿಕೆ  

“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.


ನಾನು ನಿಮ್ಮನ್ನು ಪಟ್ಟಣದ ಮಧ್ಯದಿಂದ ಹೊರಗೆ ತಂದು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನ್ಯಾಯತೀರ್ಪುಗಳನ್ನು ನಡೆಸುವೆನು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಮುಚ್ಚಿಹೋಗಿವೆ. ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;


ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು