Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:23 - ಕನ್ನಡ ಸಮಕಾಲಿಕ ಅನುವಾದ

23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರಲು ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು, ಆಗ ಅವರು ನಾನು ಯೆಹೋವನೆಂದು ತಿಳಿಯುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:23
13 ತಿಳಿವುಗಳ ಹೋಲಿಕೆ  

ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು.


ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ಮೋವಾಬ್ಯರಿಗೆ ನಾನು ಶಿಕ್ಷೆಯನ್ನು ವಿಧಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ”


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.


“ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ, “ಅದು ನಾನು ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ಗಾಯಪಟ್ಟವರು ನರಳಾಡುವರು.


ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”


“ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.


ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ.


ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು.


“ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು