Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:4 - ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಜ್ಞಾನವಿವೇಕಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಜ್ಞಾನವಿವೇಕಗಳಿಂದ ನೀನು ಐಶ್ವರ್ಯವನ್ನು ಗಳಿಸಿ ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿದ್ದೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶ್ವರ್ಯವನ್ನು ಕೂಡಿಹಾಕಿದ್ದೀ. ನಿನ್ನ ಖಜಾನೆಯಲ್ಲಿ ಬೆಳ್ಳಿಬಂಗಾರವನ್ನು ಶೇಖರಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:4
11 ತಿಳಿವುಗಳ ಹೋಲಿಕೆ  

ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.


ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.


ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?


ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ. ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ.


ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು