Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:1 - ಕನ್ನಡ ಸಮಕಾಲಿಕ ಅನುವಾದ

1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಹತ್ತನೆಯ ವರುಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:1
13 ತಿಳಿವುಗಳ ಹೋಲಿಕೆ  

ಇಪ್ಪತ್ತೇಳನೆಯ ವರ್ಷದಲ್ಲಿ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಹನ್ನೊಂದನೆಯ ವರ್ಷ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು.


ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು.


ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ,


ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.


ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:


ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,


ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು.


ಆಗ ತಹಪನೇಸಿನಲ್ಲಿ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು.


ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:


ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು