Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:10 - ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರು ನನಗೆ, “ಮನುಷ್ಯಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲ್ಲಾ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ನಿನಗೆ ನುಡಿಯುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:10
13 ತಿಳಿವುಗಳ ಹೋಲಿಕೆ  

ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು; ದೇವರ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.


ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.


ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.


ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.


ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು.


ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು.


ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು