Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:14
22 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.


ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.


ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.


ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.


ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.


ಫರಿಸಾಯರು ಕೇಳಿಸಿಕೊಂಡದ್ದನ್ನು ಯೇಸು ತಿಳಿದಾಗ, ಯೇಸು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರುಗಿ ಹೊರಟು ಹೋದರು.


ಫರಿಸಾಯರಲ್ಲಿ ಯೋಹಾನನಿಗಿಂತಲೂ ಯೇಸು ಹೆಚ್ಚಿನ ಶಿಷ್ಯರನ್ನು ಹೊಂದಿದ್ದಾರೆ ಮತ್ತು ದೀಕ್ಷಾಸ್ನಾನ ಮಾಡಿಸುತ್ತಾರೆ ಎಂಬುವುದನ್ನು ಫರಿಸಾಯರು ಕೇಳಿಸಿಕೊಂಡರು.


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.


ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ನಾನು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ಯೆಹೋವ ದೇವರು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ನನಗೆ,


ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.


ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.


ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆತಂದಿತು. ಯೆಹೋವ ದೇವರ ಮಹಿಮೆಯಿಂದ ಆಲಯವು ತುಂಬಿಕೊಂಡಿತು.


ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು