Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:21 - ಕನ್ನಡ ಸಮಕಾಲಿಕ ಅನುವಾದ

21 ಆದರೂ ನೀತಿವಂತನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ, ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಶಿಷ್ಟನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆಹೋದರೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನೀನು ಆ ಒಳ್ಳೆಯವನಿಗೆ ಪಾಪ ಮಾಡದಂತೆ ಎಚ್ಚರಿಸಿದರೆ ಮತ್ತು ಅವನು ಪಾಪ ಮಾಡುವದನ್ನು ನಿಲ್ಲಿಸಿದರೆ, ಆ ಮನುಷ್ಯನು ಸಾಯುವದಿಲ್ಲ; ಯಾಕೆಂದರೆ ಅವನು ನಿನ್ನ ಎಚ್ಚರಿಕೆಗೆ ಕಿವಿಗೊಟ್ಟನು ಮತ್ತು ನೀನು ನಿನ್ನ ಸ್ವಂತ ಪ್ರಾಣವನ್ನು ರಕ್ಷಿಸಿಕೊಂಡಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:21
23 ತಿಳಿವುಗಳ ಹೋಲಿಕೆ  

ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.


ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.


ನಾನು ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ, ನನ್ನ ಪ್ರಿಯ ಮಕ್ಕಳೆಂದು ನಿಮಗೆ ಬುದ್ಧಿ ಹೇಳುತ್ತೇನಷ್ಟೆ.


ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.


ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು