Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು, ಹೊಟ್ಟೆಯನ್ನು ತುಂಬಿಸಿಕೋ,” ಎಂದರು. ಆಗ ನಾನು ಅದನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಆತನು ನನಗೆ - ನರಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಈ ಸುರುಳಿಯನ್ನು ನಿನಗೆ ಕೊಡುತ್ತೇನೆ. ಇದನ್ನು ನುಂಗು. ಇದು ನಿನ್ನ ಹೊಟ್ಟೆಯನ್ನು ತುಂಬಲಿ.” ಆಗ ನಾನು ಆ ಸುರುಳಿಯನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನುತುಪ್ಪದ ಸಿಹಿಯಂತೆ ರುಚಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:3
18 ತಿಳಿವುಗಳ ಹೋಲಿಕೆ  

ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!


ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ! ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ!


ಅವು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ಅಮೂಲ್ಯವಾಗಿವೆ; ಅವು ಜೇನಿಗಿಂತಲೂ, ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.


ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.


“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.


ನನಗೆ ಅವರು, “ಮನುಷ್ಯಪುತ್ರನೇ, ಹೋಗು; ಇಸ್ರಾಯೇಲಿನ ಜನರ ಬಳಿಗೆ ಹೋಗಿ, ನನ್ನ ಮಾತುಗಳನ್ನು ಅವರಿಗೆ ಹೇಳು.


ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು