Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:18 - ಕನ್ನಡ ಸಮಕಾಲಿಕ ಅನುವಾದ

18 ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವದು, ಕಾರ್ಮುಗಿಲು ಅದನ್ನು ಆವರಿಸುವದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:18
30 ತಿಳಿವುಗಳ ಹೋಲಿಕೆ  

ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.


ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.


“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


ನಿನ್ನ ವೈಭವವೂ, ನಿನ್ನ ವೀಣೆಗಳ ಸ್ವರವೂ ಸಮಾಧಿಗೆ ಇಳಿದಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ.


ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.


ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.


ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ.


ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.


ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.


ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು.


“ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ.


“ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.


ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು:


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.


ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು