Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:2 - ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ “ಅಯ್ಯೋ ಆ ದಿನ!” ಎಂದು, ಅಳುತ್ತಾ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಈ ಪ್ರವಾದನೆಯನ್ನು ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅರಚಿಕೊಳ್ಳಿರಿ! ಅಯ್ಯೋ ದುರ್ದಿನವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅರಚಿಕೊಳ್ಳಿರಿ, ಅಯ್ಯೋ ದುರ್ದಿನವೇ! ಆ ದಿನ ಹತ್ತಿರವಾಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅರಚಿಕೊಳ್ಳಿರಿ! ಅಯ್ಯೋ ದಿನವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನನ್ನ ಪರವಾಗಿ ಮಾತನಾಡು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ’ ಎಂದು ಹೇಳು. “‘ಅಳುತ್ತಾ, “ಭಯಂಕರ ದಿವಸಗಳು ಬರುತ್ತವೆ” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:2
17 ತಿಳಿವುಗಳ ಹೋಲಿಕೆ  

ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.


ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.


ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.


ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.


ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: “ ‘ಅಯ್ಯೋ! ಅಯ್ಯೋ! ಮಹಾನಗರಿಯೇ, ಬಲಿಷ್ಠನಗರಿ ಬಾಬಿಲೋನೇ! ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ ಎಂದು ಶೋಕಿಸುವರು.


ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ತುರಾಯಿ ಗಿಡವೇ, ಗೋಳಾಡು. ಏಕೆಂದರೆ ದೇವದಾರು ಬಿದ್ದುಹೋಯಿತು. ಭವ್ಯವಾದ ಮರಗಳು ಹಾಳಾದವು. ಬಾಷಾನಿನ ಅಲ್ಲೋನ್ ಮರಗಳೇ, ಗೋಳಾಡಿರಿ. ದಟ್ಟವಾದ ಅಡವಿಯು ಕಡಿಯಲಾಗಿದೆ.


ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.


ತಾರ್ಷೀಷಿಗೆ ದಾಟಿ ಹೋಗಿರಿ, ದ್ವೀಪ ನಿವಾಸಿಗಳೇ ಗೋಳಾಡಿರಿ.


ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು