Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:11 - ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಅದನ್ನು ಜನಾಂಗಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ದಂಡಿಸುವನು; ನಾನು ಅದನ್ನು ತಳ್ಳಿಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ನಾನು ಒಬ್ಬ ಬಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಕೃತ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:11
21 ತಿಳಿವುಗಳ ಹೋಲಿಕೆ  

ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ. ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ. ಕೂಡಿಸುವವರು ಯಾರೂ ಇಲ್ಲದಂತೆ ನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.


ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.


“ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.


ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.


ನಾನು ನಿಮ್ಮನ್ನು ಪಟ್ಟಣದ ಮಧ್ಯದಿಂದ ಹೊರಗೆ ತಂದು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನ್ಯಾಯತೀರ್ಪುಗಳನ್ನು ನಡೆಸುವೆನು.


ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವುದಕ್ಕೂ ಸಂತೋಷಪಡುವುದಕ್ಕೂ ಕೂಡಿಬಂದರು. “ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.


ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ : “ ‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು.


ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು