Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:15 - ಕನ್ನಡ ಸಮಕಾಲಿಕ ಅನುವಾದ

15 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಆ ವೃಕ್ಷ ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆ; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ, ನದಿಯ ಶಾಖೆಗಳನ್ನು ತಡೆದುಬಿಟ್ಟೆ; ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆ. ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆನು; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ ನದಿಯ ಶಾಖೆಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂವಿುಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:15
8 ತಿಳಿವುಗಳ ಹೋಲಿಕೆ  

ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.


“ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು.


ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.


ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.


ಈಗ ನೀನು ಬೀಳುವ ದಿವಸದಲ್ಲಿ ಸಮುದ್ರ ತೀರಗಳು ನಡುಗುವುವು. ಹೌದು, ನೀನು ಅಳಿದು ಹೋದುದ್ದಕ್ಕೆ ಸಮುದ್ರ ತೀರಗಳು ಗಾಬರಿಯಾಗುವುವು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು