Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:18 - ಕನ್ನಡ ಸಮಕಾಲಿಕ ಅನುವಾದ

18 “ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇಂಥಾ ವೈಭವದಿಂದಲೂ, ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆಯಾಗಿರುವೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು, ಸುನ್ನತಿಹೀನರ ನಡುವೆ ಖಡ್ಗದಿಂದ ಹತರಾದವರ ಸಂಗಡ ಮಲಗುವಿ. ಫರೋಹನೂ, ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬುದು ಕರ್ತನಾದ ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂಥಾ ವೈಭವದಿಂದಲೂ ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವಿ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:18
19 ತಿಳಿವುಗಳ ಹೋಲಿಕೆ  

‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’


ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’


ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ”


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “ ‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ?


“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”


ಆದ್ದರಿಂದ ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಾರಾಧನೆಯನ್ನು ಬಿಟ್ಟು ಓಡಿಹೋಗಿರಿ.


ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.


ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು. ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


“ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ.


ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು