Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:24 - ಕನ್ನಡ ಸಮಕಾಲಿಕ ಅನುವಾದ

24 “ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಏಲಾಮು ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:24
29 ತಿಳಿವುಗಳ ಹೋಲಿಕೆ  

“ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.


ಅವರು ಅವರ ಎಲ್ಲಾ ಸಮೂಹಕ್ಕೂ ಹತರಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ. ಅದರ ಸುತ್ತಲೂ ಅವರ ಸಮಾಧಿಗಳಿವೆ. ಅವರೆಲ್ಲರೂ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿದ್ದಾರೆ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಕುಳಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡು ಹತರಾದವರ ಮಧ್ಯದಲ್ಲಿ ಇಡಲಾಗಿದೆ.


“ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.


ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.


ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ.


ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.


ಅವರು ಯಾಜಕರಾಗಿ ನನ್ನನ್ನು ಸಮೀಪಿಸದೆ ಮಹಾಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸಮೀಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.


ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.


ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,


ಶಿನಾರಿನ ಅರಸ ಅಮ್ರಾಫೆಲನು ಎಲ್ಲಸಾರಿನ ಅರಸ ಅರಿಯೋಕನು, ಏಲಾಮಿನ ಅರಸ ಕೆದೊರ್ಲಗೋಮರನು, ಗೋಯಿಮದ ಅರಸ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನೆಂದರೆ:


ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.


ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.


ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’


ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”


ನಾನು ಹೀಗೆ ಯೋಚಿಸಿದೆ, “ಯೆಹೋವ ದೇವರನ್ನು ಜೀವಿತರ ದೇಶದಲ್ಲಿ ಯೆಹೋವ ದೇವರನ್ನು ಕಾಣೆನೆಂದುಕೊಂಡೆನು; ಭೂಲೋಕ ನಿವಾಸಿಗಳಲ್ಲಿ ಒಬ್ಬ ಮನುಷ್ಯನನ್ನೂ ಕಾಣೆನೆಂದುಕೊಂಡೆನು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”


“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು