Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:11 - ಕನ್ನಡ ಸಮಕಾಲಿಕ ಅನುವಾದ

11 ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:11
35 ತಿಳಿವುಗಳ ಹೋಲಿಕೆ  

ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.


ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?


ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.


ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ.


ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.


ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.”


ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು ಮತ್ತು ಅವಳ ಪುತ್ರಿಯರು; ನೀನು ನಿನ್ನ ಪುತ್ರಿಯರು ಮಾಡಿದೆ ಹಾಗೆ ಮಾಡಿಲಿಲ್ಲ.


ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ.


ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.


“ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ?


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.


ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು