Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:15 - ಕನ್ನಡ ಸಮಕಾಲಿಕ ಅನುವಾದ

15 ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂದರೆ, ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರವಾದರೆ ಅವನು ಸಾಯನು, ಬಾಳೇ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:15
26 ತಿಳಿವುಗಳ ಹೋಲಿಕೆ  

ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,


ನಿಮ್ಮ ಸೂತ್ರಗಳನ್ನು ನಾನು ಎಂದಿಗೂ ಮರೆಯುವುದಿಲ್ಲ, ಏಕೆಂದರೆ ಅವುಗಳಿಂದ ನನ್ನ ಜೀವವನ್ನು ಪರಿಪಾಲಿಸಿದ್ದೀರಿ.


ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಾದವನಿಗೆ ವಸ್ತ್ರವನ್ನು ಹೊದಿಸಿ,


ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,


ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ; ಅವರ ವಸ್ತ್ರಗಳನ್ನು ಸಹ ನೀನು ಕಿತ್ತುಕೊಂಡಿರುವೆ.


ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.


ಬೀಸುವ ಕಲ್ಲಿನಲ್ಲಿ ಅಡಿಗಲ್ಲನ್ನಾದರೂ, ಮೇಲಿನ ಕಲ್ಲನ್ನಾದರೂ ಒತ್ತೆಯಾಗಿ ತೆಗೆದುಕೊಳ್ಳಬಾರದು. ಹಾಗೆ ಮಾಡಿದರೆ, ಅದು ವ್ಯಕ್ತಿಯ ಜೀವನೋಪಾಯವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಿರುವುದು.


ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ.


ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ; ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ, ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.


ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು