Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:20 - ಕನ್ನಡ ಸಮಕಾಲಿಕ ಅನುವಾದ

20 ಆದರೂ, ‘ನೀವು ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಅನ್ನುತ್ತೀರಿ. ಇಸ್ರಾಯೇಲಿನ ಮನೆತನದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯತೀರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ನೀವು ಯೆಹೋವನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನಾನು ನ್ಯಾಯವಂತನಲ್ಲ, ಎಂದು ನೀವು ಹೇಳುತ್ತೀರಿ. ಆದರೆ ನಾನು ಖಂಡಿತವಾಗಿ ಹೇಳುತ್ತೇನೆ, ಇಸ್ರೇಲ್ ಮನೆತನದವರೇ, ಪ್ರತಿಯೊಬ್ಬನೂ ತಾನು ಮಾಡಿದ ಕಾರ್ಯಗಳಿಗಾಗಿ ನ್ಯಾಯ ಹೊಂದುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:20
15 ತಿಳಿವುಗಳ ಹೋಲಿಕೆ  

ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


“ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.


ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.


“ಆದರೂ ನಿನ್ನ ಜನರ ಮಕ್ಕಳು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತಾರೆ. ಅವರಿಗಾದರೋ ಅವರ ಮಾರ್ಗವೇ ನೀತಿಯುಕ್ತವಲ್ಲ.


ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.


ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.


“ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’


ಆದರೆ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ ಅವನು ಅವುಗಳಿಂದ ಉಳಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು