Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:31 - ಕನ್ನಡ ಸಮಕಾಲಿಕ ಅನುವಾದ

31 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 [ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:31
34 ತಿಳಿವುಗಳ ಹೋಲಿಕೆ  

ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


“ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.


ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.


ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.


ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನ್ನ ತಾಯಿ ಮತ್ತು ನನ್ನ ಸಹೋದರರು ಆಗಿದ್ದಾರೆ,” ಎಂದು ಹೇಳಿದರು.


ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.


ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.


ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಸ್ವಾರ್ಥದ ಲಾಭಗಳ ಕಡೆಗಲ್ಲ, ಆದರೆ ನಿಮ್ಮ ಶಾಸನಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸಿರಿ.


ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


“ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.


ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.


ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”


ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು