Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:5 - ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲವಷ್ಟೆ; ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ತುತ್ತೂರಿಯ ಶಬ್ದ ಕೇಳಿದನು. ಆದರೆ ಅದನ್ನು ಅಲಕ್ಷಿಸಿದನು. ಆದ್ದರಿಂದ ಅವನ ಮರಣಕ್ಕೆ ಅವನೇ ಕಾರಣನು. ಅವನು ಆ ಎಚ್ಚರಿಕೆಯ ಶಬ್ದಕ್ಕೆ ಗಮನವನ್ನು ಕೊಟ್ಟಿದ್ದರೆ ಅವನು ಬದುಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:5
10 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ, ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿ ಕಳುಹಿಸಿ, ತನ್ನ ಸೈನ್ಯವನ್ನು ಕರೆಯಿಸಿಕೊಂಡನು. ಹೀಗೆ ಅವನು ಹಲವು ಸಾರಿ ತಪ್ಪಿಸಿಕೊಂಡನು.


ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಯಾವನು ಕೊಂಬಿನ ಧ್ವನಿಯನ್ನು ಕೇಳಿ ಎಚ್ಚರವಾಗುವುದಿಲ್ಲವೋ ಅವನನ್ನು ಖಡ್ಗವು ನಾಶಮಾಡಿದರೆ ಅವನ ಸಾವಿಗೆ ಅವನೇ ಹೊಣೆಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು