Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:18 - ಕನ್ನಡ ಸಮಕಾಲಿಕ ಅನುವಾದ

18 ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 (ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 (ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 [ಟಗರುಹೋತಗಳೇ,] ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ವಿುಕ್ಕ ಮೇವನ್ನು ತುಳಿದು ಕಾಲಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ವಿುಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಒಳ್ಳೆಯ ದೇಶದಲ್ಲಿ ಬೆಳೆಯುವ ಹುಲ್ಲನ್ನು ಮೇಯಬಹುದು. ಆದ್ದರಿಂದ ಬೇರೆ ಕುರಿಗಳು ಮೇಯಬೇಕಾದ ಹುಲ್ಲನ್ನು ನೀವು ಯಾಕೆ ತುಳಿದು ಹಾಳುಮಾಡುವಿರಿ? ನೀವು ಶುದ್ಧವಾದ ನೀರು ಬೇಕಾದಷ್ಟು ಕುಡಿಯಬಹುದು. ಆದರೆ ಬೇರೆ ಕುರಿಗಳು ನೀರು ಕುಡಿಯದಂತೆ ಯಾಕೆ ನೀರನ್ನು ಕದಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:18
16 ತಿಳಿವುಗಳ ಹೋಲಿಕೆ  

“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಸಾರ್ವಭೌಮ ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಸಾರ್ವಭೌಮ ಯೆಹೋವ ದೇವರೇ, ಇದು ನೀವು ಮನುಷ್ಯನೊಂದಿಗೆ ವರ್ತಿಸುವ ಕ್ರಮ.


ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?


ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.


“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?


ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು.


ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ.


ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು.


ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು