Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:25 - ಕನ್ನಡ ಸಮಕಾಲಿಕ ಅನುವಾದ

25 “ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:25
31 ತಿಳಿವುಗಳ ಹೋಲಿಕೆ  

ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.


“ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.


ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು.


ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.


ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.


ಆದಕಾರಣ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.


ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.


ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು. ಆದ್ದರಿಂದ ನಾನೇ ಯೆಹೋವ ದೇವರೆಂದು ನಿಮಗೆ ಗೊತ್ತಾಗುವುದು.


ನೀವು ನನ್ನ ಕೋಲಿನ ಕೆಳಗೆ ನಡೆಯುವಾಗ, ನನ್ನ ಗಮನವು ನಿಮ್ಮ ಮೇಲೆ ಇರುತ್ತದೆ ಮತ್ತು ನಾನು ನಿಮ್ಮನ್ನು ಒಡಂಬಡಿಕೆಗೆ ತರುತ್ತೇನೆ.


ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.


ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.


ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.


ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು