Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:4 - ಕನ್ನಡ ಸಮಕಾಲಿಕ ಅನುವಾದ

4 ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನೀವು ಬಲಹೀನ ಕುರಿಗಳನ್ನು ಬಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಬಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:4
24 ತಿಳಿವುಗಳ ಹೋಲಿಕೆ  

ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ಆದ್ದರಿಂದ, ಜೋತು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ಬಲಪಡಿಸಿರಿ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,


“ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.


“ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ಆ ದಿನದಲ್ಲಿ ಅವನು ಆಣೆಯಿಟ್ಟು, “ನಾನು ಉಪಶಮನ ಮಾಡುವವನಾಗುವುದಿಲ್ಲ. ಏಕೆಂದರೆ ನನ್ನ ಮನೆಯಲ್ಲಿ ಅನ್ನವಾಗಲಿ, ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ,” ಎಂದು ಉತ್ತರಿಸುವನು.


ಅದೂ ಸಿಂಹಗಳ ನಡುವೆ ತಿರುಗಾಡಿ, ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.


ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.


ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಪಂಜರದಲ್ಲಿ ಹಾಕಿ, ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾಯೇಲಿನ ಪರ್ವತಗಳ ಮೇಲೆ ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು