Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:11 - ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ನನ್ನ ಜನರನ್ನು ದ್ವೇಷಿಸಿ ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತಿಮಾಡುವೆನು; ನಿನ್ನನ್ನು ದಂಡಿಸಿದಾಗ ನಾನು ಅವರಿಗೆ ಗೋಚರನಾಗುವೆನು, ಇದು ಕರ್ತನಾದ ಯೆಹೋನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಬೇಕಾದರೆ, ನೀನು ಅವರನ್ನು ದ್ವೇಷಿಸಿದೆ. ಆದ್ದರಿಂದ, ನನ್ನ ಜೀವದಾಣೆ, ನೀನು ಹೇಗೆ ಅವರನ್ನು ನೋಯಿಸಿದೆಯೋ ಹಾಗೆಯೇ ನಾನು ನಿನ್ನನ್ನು ಶಿಕ್ಷಿಸುವೆನು. ಈ ರೀತಿಯಲ್ಲಿ, ನನ್ನ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:11
8 ತಿಳಿವುಗಳ ಹೋಲಿಕೆ  

ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.


ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”


“ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು