Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:19 - ಕನ್ನಡ ಸಮಕಾಲಿಕ ಅನುವಾದ

19 ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶಗಳಲ್ಲಿ ಚದರಿಹೋದರು. ಅವರ ದುರ್ಮಾರ್ಗ ದುರಾಚಾರಗಳಿಗೆ ಅನುಸಾರವಾಗಿ ಅವರನ್ನು ನ್ಯಾಯತೀರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜನಾಂಗಗಳೊಳಗೆ ಅವರನ್ನು ಚದರಿಸುವೆನು; ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜನಾಂಗಗಳೊಳಗೆ ಅವರನ್ನು ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇಶಾಂತರಕ್ಕೆ ಅವರನ್ನು ಚದರಿಸಿ, ಎಲ್ಲಾ ದೇಶಗಳಲ್ಲಿ ಅವರನ್ನು ಹರಡಿಸಿಬಿಟ್ಟೆನು. ಅವರು ಮಾಡಿದ ದುಷ್ಟತನಕ್ಕೆ ನಾನು ಶಿಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:19
15 ತಿಳಿವುಗಳ ಹೋಲಿಕೆ  

ಅವರ ಅಶುದ್ಧತ್ವದ ಪ್ರಕಾರವೂ ಅವರ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”


ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.


ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು. ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.


“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ಜನಾಂಗಗಳೊಳಗೆ ನಾಶವಾಗುವಿರಿ. ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವುದು.


“ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.


ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು