Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:21 - ಕನ್ನಡ ಸಮಕಾಲಿಕ ಅನುವಾದ

21 “ನಾನು ನನ್ನ ಮಹಿಮೆಯನ್ನು ಇತರ ಜನಾಂಗಗಳಲ್ಲಿ ಸ್ಥಾಪಿಸಲು ಎಲ್ಲಾ ಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡಿಸಿದವನು ನಾನೇ ಎಂಬದು ಆ ಜನಾಂಗಗಳಿಗೆಲ್ಲಾ ಗೋಚರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನ್ನು ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನ್ನನ್ನು ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನ್ನ ಸಾಮರ್ಥ್ಯ ತೋರಿಸಿದುದನ್ನು ಅವರು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:21
18 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.


ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.


ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.


ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.


ನನ್ನ ಜನರ ಸ್ತ್ರೀಯರನ್ನು ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. ಅವರ ಮಕ್ಕಳಿಂದ ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ.


ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?


ನಿಮ್ಮ ಕಣ್ಣುಗಳಿಂದ ನೋಡಿ, ‘ಇಸ್ರಾಯೇಲಿನ ಮೇರೆ ಆಚೆಗೂ ಯೆಹೋವ ದೇವರು ಮಹೋನ್ನತರು!’ ಎಂದು ನೀವು ಹೇಳುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು