Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:27 - ಕನ್ನಡ ಸಮಕಾಲಿಕ ಅನುವಾದ

27 ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ತಮ್ಮ ನಾಚಿಕೆಯನ್ನು ಮರೆತುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲ ದ್ರೋಹಿಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬೇರೆಬೇರೆ ದೇಶಗಳಿಂದ ನಾನು ನನ್ನ ಜನರನ್ನು ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನ್ನು ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:27
12 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.


ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು