Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:6 - ಕನ್ನಡ ಸಮಕಾಲಿಕ ಅನುವಾದ

6 ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಿತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:6
21 ತಿಳಿವುಗಳ ಹೋಲಿಕೆ  

ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು.


ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.


ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.


ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,


ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.”


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.


ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’


ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ.


ಗೋಮೆರ್ ಮತ್ತು ಅದರ ಎಲ್ಲಾ ದಳಗಳನ್ನೂ, ಉತ್ತರ ದಿಕ್ಕಿನ ತೋಗರ್ಮದವರನ್ನೂ ಮತ್ತು ಅದರ ಎಲ್ಲಾ ದಳಗಳನ್ನೂ, ಹೀಗೆ ನಿನ್ನ ಸಂಗಡವಿರುವ ಅನೇಕ ಜನರನ್ನೂ ನಿನ್ನೊಂದಿಗೆ ಬರಮಾಡುವೆನು.


ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.


ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.


“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”


“ಓ ಮನುಷ್ಯಪುತ್ರನೇ, ರೋಷ್, ಮೆಷೆಕ್ ಮತ್ತು ತೂಬಲ್‌ನ ಮುಖ್ಯ ರಾಜಕುಮಾರನಾದ ಮಾಗೋಗ್ ದೇಶದ ಗೋಗನ ಕಡೆಗೆ ನಿನ್ನ ಮುಖವನ್ನು ತಿರುಗಿಸು; ಮತ್ತು ಅವನ ವಿರುದ್ಧವಾಗಿ ಪ್ರವಾದಿಸು.


ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು