Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:3 - ಕನ್ನಡ ಸಮಕಾಲಿಕ ಅನುವಾದ

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವದು, ನೀನು ಅದನ್ನು ಮುತ್ತಿದಂತಾಗುವದು. ಇದು ಇಸ್ರಾಯೇಲ್ ವಂಶದವರಿಗೆ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:3
13 ತಿಳಿವುಗಳ ಹೋಲಿಕೆ  

ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.”


ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.


ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.


ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.


ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.


ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.


ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ.


ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿರುವುವು. ರಾಹುತರು ಪಟ್ಟಣದ ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು