Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:39 - ಕನ್ನಡ ಸಮಕಾಲಿಕ ಅನುವಾದ

39 ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:39
22 ತಿಳಿವುಗಳ ಹೋಲಿಕೆ  

ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


“ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ.


“ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!


ಇವರು ಮಾತ್ರ ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ಇವರು ಮಾತ್ರ ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಮತ್ತು ನನಗೆ ಕಾವಲುಗಾರರಾಗಿ ಸೇವೆ ಸಲ್ಲಿಸಬೇಕು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.


ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು.


ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ನಿರ್ಮಿತವಾಗಿದ್ದವು. ಅವುಗಳ ಉದ್ದ ಮತ್ತು ಅಗಲ ಸುಮಾರು ಎಂಬತ್ತು ಸೆಂಟಿಮೀಟರ್, ಎತ್ತರವೂ ಸುಮಾರು ಐವತ್ತಮೂರು ಸೆಂಟಿಮೀಟರ್. ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿಸುವ ಸಲಕರಣೆಗಳನ್ನೂ ಇಡುತ್ತಿದ್ದರು.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.


ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.


ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಮೇಜುಗಳೂ ಇದ್ದವು.


ಬಾಗಿಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞಗಳನ್ನು ಅರ್ಪಿಸುತ್ತಿದ್ದರು.


“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.


ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು