Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:46 - ಕನ್ನಡ ಸಮಕಾಲಿಕ ಅನುವಾದ

46 ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಬಡಗಲಿಗೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ; ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:46
16 ತಿಳಿವುಗಳ ಹೋಲಿಕೆ  

“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಬಳಿಗೆ ಸಮೀಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯರಿಗೂ ದೋಷಪರಿಹಾರ ಬಲಿಗಾಗಿ ಎಳೆಯ ಹೋರಿಯನ್ನು ಕೊಡಬೇಕು.


ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.


ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.


“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ದೇಶದ ಪರಿಶುದ್ಧ ಭಾಗವು ಯೆಹೋವ ದೇವರಿಗೆ ಸೇವೆ ಮಾಡಲು ಸಮೀಪಿಸುವಂತೆ, ಪರಿಶುದ್ಧಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ.


ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.


ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;


“ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,


ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು