Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:13
27 ತಿಳಿವುಗಳ ಹೋಲಿಕೆ  

“ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ?


ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”


ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು.


ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


“ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸಬೇಕು.


ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.


ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.


ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.


“ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;


ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು. ಅದರ ಉದ್ದವು ತೊಂಬತ್ತು ಮೊಳವಾಗಿತ್ತು.


ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು.


ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು