Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:1 - ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಈ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ಪುನಃ ಕರೆದುತಂದನು; ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಮೂಡಣ ಹೊರಗಣ ಹೆಬ್ಬಾಗಿಲಿಗೆ ಪುನಃ ಕರತಂದನು; ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಬಳಿಕ ನನ್ನನ್ನು ಆ ಮನುಷ್ಯನು ಆಲಯದ ಪೂರ್ವದ್ವಾರಕ್ಕೆ ತಂದನು. ನಾವು ದ್ವಾರದ ಹೊರಗಿದ್ದೆವು. ದ್ವಾರವು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:1
12 ತಿಳಿವುಗಳ ಹೋಲಿಕೆ  

ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಿಲಿಗೆ ಕರೆದುಕೊಂಡು ಹೋದನು.


ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು.


ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.


ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.


ಆಗ ಯೆಹೋವ ದೇವರ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿಸಿತು.


ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


ಆಗ ಯೆಹೋಷಾಫಾಟನು ಹೊಸ ಅಂಗಳದ ಮುಂದೆ ಯೆಹೋವ ದೇವರ ಮಂದಿರದಲ್ಲಿರುವ ಯೆಹೂದದ ಯೆರೂಸಲೇಮಿನ ಜನಸಮೂಹದ ಮಧ್ಯದಲ್ಲಿ ನಿಂತು:


ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.


ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.


“ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು