Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:24 - ಕನ್ನಡ ಸಮಕಾಲಿಕ ಅನುವಾದ

24 “ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ವ್ಯಾಜ್ಯವಾಗುವಲ್ಲಿ ಅದನ್ನು ತೀರಿಸಲು ನಿಂತು ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳು ಆಚರಿಸಲ್ಪಡುವಂತೆ ನೋಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:24
16 ತಿಳಿವುಗಳ ಹೋಲಿಕೆ  

ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.


ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.


ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.


ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.


ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.


ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.


ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.”


“ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು