Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:3 - ಕನ್ನಡ ಸಮಕಾಲಿಕ ಅನುವಾದ

3 ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಹವಿರ್ಭೋಜನಮಾಡುವದಕ್ಕೆ ಇಲ್ಲಿ ಪ್ರಭುವಾಗಿ ಕೂತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಸೇರಿ ಅದೇ ಮಾರ್ಗವಾಗಿ ಹೊರಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:3
18 ತಿಳಿವುಗಳ ಹೋಲಿಕೆ  

ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ.


ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.”


ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


“ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.


ಯೆಹೋವ ದೇವರ ಆಲಯದ ಪ್ರಾಕಾರದ ಒಳಗೆ ಸಬ್ಬತ್ ದಿನದ ಆರಾಧನೆಗಾಗಿ, ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದನು, ಇವುಗಳನ್ನೆಲ್ಲ ಅಸ್ಸೀರಿಯದ ಅರಸನ ನಿಮಿತ್ತವಾಗಿ ಆಹಾಜನೇ ಬದಲಾಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು