Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:7 - ಕನ್ನಡ ಸಮಕಾಲಿಕ ಅನುವಾದ

7 ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:7
38 ತಿಳಿವುಗಳ ಹೋಲಿಕೆ  

ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.


“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


“ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!


ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,


ಯಾಜಕನಾದ ಆರೋನನ ಸಂತತಿಯಲ್ಲಿ ನ್ಯೂನತೆವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಬರಬಾರದು. ನ್ಯೂನತೆವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವುದಕ್ಕಾಗಿ ಸಮೀಪ ಬರಬಾರದು.


“ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು.


ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.


ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.


ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.


“ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.


ಯೆಹೋವ ದೇವರು ಮೋಶೆ ಆರೋನರಿಗೆ, “ಪಸ್ಕದ ಶಾಸನವು ಇದೆ: “ವಿದೇಶಿಯರಲ್ಲಿ ಯಾರೂ ಪಸ್ಕಭೋಜನವನ್ನು ತಿನ್ನಬಾರದು.


“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ.


ನಾನು ಲೇವಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಮುಂದುವರಿಯುತ್ತದೆ. ಈ ಎಚ್ಚರಿಕೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳಿದುಕೊಳ್ಳಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು