Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:9 - ಕನ್ನಡ ಸಮಕಾಲಿಕ ಅನುವಾದ

9 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನರೊಳಗೆ ತನುಮನಗಳಲ್ಲಿ ಸುನ್ನತಿಯಾಗಿಲ್ಲದವನು ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:9
13 ತಿಳಿವುಗಳ ಹೋಲಿಕೆ  

ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.


ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


“ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.


ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು.


ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು