Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:2 - ಕನ್ನಡ ಸಮಕಾಲಿಕ ಅನುವಾದ

2 ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:2
18 ತಿಳಿವುಗಳ ಹೋಲಿಕೆ  

ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.”


ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.


ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


“ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.


ಯಾಜಕನು ದೋಷಪರಿಹಾರ ಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.


ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.


ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರೇ, ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?


ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.


ಆಗ ಅವನು ಕೆಳಗಿನ ಬಾಗಿಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.


ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು