Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:12 - ಕನ್ನಡ ಸಮಕಾಲಿಕ ಅನುವಾದ

12 ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:12
11 ತಿಳಿವುಗಳ ಹೋಲಿಕೆ  

ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.


ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.


ನಾನು ತಿರುಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆ ಕಡೆಯೂ ಈ ಕಡೆಯೂ ಅತಿ ಹೆಚ್ಚು ಮರಗಳಿದ್ದವು.


ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”


ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ, ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು