Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅವನು ನನಗೆ ಹೀಗೆ ಹೇಳಿದನು - ಈ ಪ್ರವಾಹವು ಪೂರ್ವಪ್ರಾಂತ್ಯಕ್ಕೆ ಹೊರಟು ಅರಾಬಾ ಎಂಬ ತಗ್ಗಿಗೆ ಇಳಿದು ಲವಣಸಮುದ್ರದ ಕಡೆಗೆ ಹರಿಯುವದು; [ದೇವಸ್ಥಾನದಿಂದ] ಹೊರಟ ಪ್ರವಾಹವು ಲವಣ ಸಮುದ್ರಕ್ಕೆ [ಸೇರಲು] ಅದರ ನೀರು ಸಿಹಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ನನ್ನೊಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:8
17 ತಿಳಿವುಗಳ ಹೋಲಿಕೆ  

ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.


ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿ ಇರುವ ಎಲ್ಲಾ ಅರಾಬಾದನ್ನು ಸಹ, ಪಿಸ್ಗಾದ ಬೆಟ್ಟದ ತಗ್ಗಿನಲ್ಲಿರುವ ಬಯಲಿನ ಸಮುದ್ರದವರೆಗೆ ಸ್ವಾಧೀನಮಾಡಿಕೊಂಡರು.


ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.


ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು.


ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.


ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು.


ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು. ಅಲ್ಲಿ ದೇವರು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿದರು. ಅಲ್ಲಿಯೇ ದೇವರು ಅವರನ್ನು ಪರೀಕ್ಷಿಸಿದರು.


ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.


ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು