Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:14 - ಕನ್ನಡ ಸಮಕಾಲಿಕ ಅನುವಾದ

14 ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಕ್ಷೇತ್ರ ಸರ್ವೇಶ್ವರನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಅದಲುಬದಲು ಮಾಡಕೂಡದು. ನಾಡಿನ ಆ ಶ್ರೇಷ್ಠಾಂಶ ಪರರವಶವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಕ್ಷೇತ್ರವು ಯೆಹೋವನಿಗೆ ಮೀಸಲಾದದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಬದಲಾಬದಲಿ ಮಾಡಕೂಡದು, ದೇಶದ ಆ ಶ್ರೇಷ್ಠಾಂಶವು ಪರವಶವಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಪ್ರದೇಶವನ್ನು ಲೇವಿಯರು ಮಾರಕೂಡದು, ಬದಲಾಯಿಸಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಬಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:14
12 ತಿಳಿವುಗಳ ಹೋಲಿಕೆ  

“ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.


ಮೀಸಲಾಗಿರುವ ಈ ನಾಡಿನ ವಿಶೇಷ ಕಾಣಿಕೆಯು ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧವಾದದ್ದಾಗಿರಬೇಕು.


ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು.


ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.


“ ‘ಲೇವಿಯರ ಪಟ್ಟಣಗಳ ವಿಷಯವಾಗಿಯೂ, ಅವರ ಸ್ವಾಧೀನವಾಗಿರುವ ಪಟ್ಟಣಗಳ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.


“ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು