Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:11 - ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:11
48 ತಿಳಿವುಗಳ ಹೋಲಿಕೆ  

ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


“ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


“ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,


ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.


ಆದರೆ ಅವರ ಅಪರಾಧವು ಜಗತ್ತಿಗೆ ಐಶ್ವರ್ಯವನ್ನು ಉಂಟುಮಾಡಿತು. ಅವರ ನಷ್ಟವೇ ಯೆಹೂದ್ಯರಲ್ಲದವರಿಗೆ ಐಶ್ವರ್ಯವನ್ನು ಉಂಟುಮಾಡುವುದಾದರೆ, ಅವರ ಪರಿಪೂರ್ಣತೆಯು ಇನ್ನೂ ಎಷ್ಟೋ ಹೆಚ್ಚಾದ ಐಶ್ವರ್ಯವನ್ನು ಉಂಟುಮಾಡಬಹುದಲ್ಲವೇ!


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.


“ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ.


ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.


ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.


ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.


ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.


“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


“ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”


ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.


ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.


ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರಪಡಿಸಿ ನನ್ನ ವಿಶ್ರಾಂತಿಯ ದಿನಗಳನ್ನು ಕೆಡಿಸಿದ್ದಾರೆ.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದುದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ, ನನ್ನ ನ್ಯಾಯಗಳನ್ನು ಪಾಲಿಸದೇ ಇದ್ದುದರಿಂದಲೂ, ನಿಮ್ಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ,


ಆಮೇಲೆ ಅವನು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಮತ್ತೊಂದು ಸಾರಿ ತಿರುಗಿಕೋ. ಇವುಗಳಿಂದ ಇನ್ನೂ ಅಸಹ್ಯವಾದವುಗಳನ್ನು ಕಾಣುವೆ,” ಎಂದು ಹೇಳಿದನು.


ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ.


ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು