Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:12 - ಕನ್ನಡ ಸಮಕಾಲಿಕ ಅನುವಾದ

12 ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:12
37 ತಿಳಿವುಗಳ ಹೋಲಿಕೆ  

ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.


ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು.


ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.


ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”


ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”


ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.


ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.


“ಅಡವಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತೆ ಅವರನ್ನು ಚದರಿಸುವೆನು.


ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”


ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.


“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


“ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,


“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.


ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶಗಳಲ್ಲಿ ಚದರಿಹೋದರು. ಅವರ ದುರ್ಮಾರ್ಗ ದುರಾಚಾರಗಳಿಗೆ ಅನುಸಾರವಾಗಿ ಅವರನ್ನು ನ್ಯಾಯತೀರಿಸಿದೆನು.


ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.


ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.


ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. ತನ್ನ ಪ್ರಾಣವನ್ನು ಬಿಡುತ್ತಾಳೆ. ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. ಇದಲ್ಲದೆ ಅವರ ಶೇಷವನ್ನು ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.


ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು